- Advertisement -
- Advertisement -
ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -