Tuesday, July 21, 2026
spot_imgspot_img
spot_imgspot_img

ಷೇರು ಮಾರುಕಟ್ಟೆಯಲ್ಲಿ ನಷ್ಟ; ಮನನೊಂದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.

ವೆಂಕಟೇಶ್(50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಜೊತೆಗೆ ಸಾಲಗಾರರ ಕಾಟವು ಹೆಚ್ಚಾಗಿದ್ದರಿಂದ ಮನನೊಂದು ಹೆಬ್ಬಾಳ ಬಳಿಯಲ್ಲಿರುವ ರೈಲ್ವೆ ಟ್ರ‍್ಯಾಕ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!