Monday, April 29, 2024
spot_imgspot_img
spot_imgspot_img

ಬಂಟ್ವಾಳ: ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ; ದೂರುದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು “ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.

“ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಫೇಸ್ ಬುಕ್ ಖಾತೆಯಾಗಲಿ, ಅಥವಾ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಕಂಡುಬರದಂತೆ ನಿಗಾವಹಿಸುವಂತೆಯೂ ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!