Sunday, June 29, 2025
spot_imgspot_img
spot_imgspot_img

ನಟ ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟರ್‍ ಡಿಕ್ಕಿ;ಗಂಭೀರ ಗಾಯಗೊಂಡ ಯುವಕ ಮೃತ್ಯು..!

- Advertisement -
- Advertisement -

ನಟ ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದ ಪರಿಣಾಮ ಗಂಭೀರ ಗಾಯಗೊಂಡ ಯುವಕ ಮೃತಪಟ್ಟ ಘಟನೆ ಗದಗದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಗದಗ ಬಿಂಕದಕಟ್ಟಿ ನಿವಾಸಿ ನಿಖಿಲ್ ಗೌಡ (22) ಎಂದು ಗುರುತಿಸಲಾಗಿದೆ.

ಈತ ಲಕ್ಷ್ಮೇಶ್ವರ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ.ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೀಗಾಗಿ ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಟ್ಟ ಯಶ್‌, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ತೆರಳಿದ್ದರು. ಈ ವೇಳೆ ಯಶ್‌ ನೋಡಲು ನಿಖಿಲ್‌ ಗದಗಕ್ಕೆ ಬಂದಿದ್ದ. ಬಳಿಕ ಯಶ್ ಹುಬ್ಬಳ್ಳಿಗೆ ವಾಪಸ್ಸಾಗುವಾಗ ತನ್ನ ಬೈಕಿನಲ್ಲಿ ಯಶ್ ವಾಹನ ಫಾಲೋ ಮಾಡಲು ಮುಂದಾಗಿದ್ದ. ಈ ವೇಳೆ ಪೊಲೀಸ್ ವಾಹನಕ್ಕೆ ‌ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಪರಿಣಾಮ ನಿಖಿಲ್‌ ಕೂಡ ಗಂಭೀರ ಗಾಯಗೊಂಡಿದ್ದ. ಗಾಯಳು ನಿಖಿಲ್‌ನನ್ನ ಗದಗ ನಗರದ ಜಿಮ್ಸ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ಶಿಫ್ಟ್ ಮಾಡಿದ್ದರು. ಆದರೂ ಕೂಡ ಚಿಕಿತ್ಸೆ ಫಲಿಸದೇ ನಿಖಿಲ್ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!