Sunday, June 29, 2025
spot_imgspot_img
spot_imgspot_img

ಬೆಂಕಿ ಆರಿಸಲು ಹೋದ ರೈತ ಮಹಿಳೆ ಸಾವು..!

- Advertisement -
- Advertisement -

ಬೆಂಕಿ ಆರಿಸಲು ಹೋದ ರೈತ ಮಹಿಳೆ ಬೆಂಕಿಗಾಹುತಿಯಾದ ಘಟನೆ ಹಾಸನದ ಆಲೂರು ತಾಲ್ಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ರತ್ನಮ್ಮ (63) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ತಮ್ಮ ಜಮೀನಿಗೆ ಬೆಂಕಿ ಬಿದ್ದ ವಿಷಯ ತಿಳಿದು ರತ್ನಮ್ಮ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ತನ್ನ ಜಮೀನಿನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿತ್ತು. ಇದನ್ನು ಕಂಡು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ ಈ ವೇಳೆ ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ರತ್ನಮ್ಮ ಸಿಲುಕಿದ್ದಾರೆ. ಬೆಂಕಿಗೆ ಸಿಲುಕಿ ಹೊರಬಾರಲಾರದೆ ರೈತ ಮಹಿಳೆ ರತ್ನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರತ್ನಮ್ಮ ಮೃತದೇಹ ಆಲೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!