- Advertisement -
- Advertisement -
ಕೃಷಿ ಹೊಂಡದಲ್ಲಿ ಮಗನಿಗೆ ಈಜು ತರಬೇತಿ ನೀಡುತ್ತಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಂಗಡಿ ಬಾಬು (45) ಮೃತ ತಂದೆ.
ಬಾಬು ತನ್ನ ಮಗ ತೇಜುವಿಗೆ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದರು. ಮಗನಿಗೆ ತರಬೇತಿ ನೀಡಿ ದಡಕ್ಕೆ ತಲುಪಿಸಿದ ತಂದೆ ಮರಳಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದು, ಮತ್ತೆ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ತಂದೆ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಮಗ ಜೋರಾಗಿ ಕಿರುಚಿದ ಕಾರಣ ಅಕ್ಕಪಕ್ಕದ ಜಮೀನಿನವರು ಬಂದು ಬಾಬುವನ್ನ ರಕ್ಷಣೆ ಮಾಡಲು ಪ್ರಯತ್ನಿಸಿದರಾದರೂ ಪ್ರಯತ್ನ ವಿಫಲವಾಗಿದೆ. ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -