ಇನ್ಸ್ಟಾಗ್ರಾಮ್ನಲ್ಲಿ ಶುರುವಾದ ಜಗಳ ಕೊನೆಗೆ ಬಾಲಕನ ಹತ್ಯೆಯಲ್ಲಿ ಕೊನೆಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ(17) ಎನ್ನುವ ಅಪ್ರಾಪ್ತ ಬಾಲಕನನ್ನು ಬರ್ಬರ ಹತ್ಯೆ ಮಾಡಲಾಗಿದೆ.
ಅಪರಿಚಿತ ಹುಡುಗಿ ಹೆಸರಿನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ಪ್ರಜ್ವಲ್ಗೆ ಮೆಸೇಜ್ ಮಾಡಿದ್ದರು. ಮೆಸೇಜ್ ಮಾಡುತ್ತಿರುವುದು ಹುಡುಗ ಎಂದು ಗೊತ್ತಾಗುತ್ತಿದ್ದಂತೆಯೇ ಪ್ರಜ್ವಲ್ ಕೋಪಗೊಂಡು ಮೆಸೇಜ್ನಲ್ಲಿ ಅವಾಚ್ಯವಾಗಿ ಬೈದಿದ್ದಾನೆ. ಇದರಿಂದ ಕೆರಳಿದ ಗ್ಯಾಂಗ್ ಕಟ್ಟಿಕೊಂಡು ಬಂದು ಜಗಳ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಅಂತಿಮವಾಗಿ ಪ್ರಜ್ವಲ್ನನ್ನು ಹತ್ಯೆ ಮಾಡಿದ್ದಾರೆ.
ಸೆಪ್ಟೆಂಬರ್ 26ರಂದು ಸಂಜೆ ಹುಡುಗರ ಗ್ಯಾಂಗ್ , ಪ್ರಜ್ವಲ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಜ್ವಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ಕು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ.