- Advertisement -
- Advertisement -


ಧಾರವಾಡ: ಮಕ್ಕಳನ್ನು ಕರೆದೊಯ್ಯುವ ವೇಳೆ ಶಾಲಾ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ಬೆಳಕಿಗೆ ಬಂದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
ನವಲೂರು ಬಳಿಯ ಖಾಸಗಿ ಶಾಲಾ ವಾಹನ ಇದಾಗಿದ್ದು, ಮಕ್ಕಳನ್ನ ಕರೆದುಕೊಂಡು ಶಾಲೆಗೆ ಹೋಗುವಾಗ ವಾಹನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೆಲವೇ ಮಕ್ಕಳು ವಾಹನದಲ್ಲಿದ್ದ ಕಾರಣ ಎಲ್ಲರನ್ನು ಕೆಳಗಿಳಿಸಿದ ಚಾಲಕ ಜಾಗರೂಕತೆ ಮೆರೆದಿದ್ದಾರೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -