Sunday, April 28, 2024
spot_imgspot_img
spot_imgspot_img

ಬರೋಬ್ಬರಿ 40 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಬದುಕುಳಿದ ಮೀನುಗಾರ….!!

- Advertisement -G L Acharya panikkar
- Advertisement -

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನಿಂದ ಮೀನುಗಾರನೊಬ್ಬ ಆಯತಪ್ಪಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದು, ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಅಪರೂಪದ ಘಟನೆ ನಡೆದಿದೆ.

ಬೈಂದೂರು ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ.

ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ ಸಮುದ್ರದಲ್ಲಿ ಬೀಳುತ್ತಾನೆ. ಮುರುಘನ್​ ಸಮುದ್ರದಲ್ಲಿ ಬಿದ್ದಿರುವುದು ಉಳಿದ ಮೀನುಗಾರರಿಗೆ ತಿಳಿದಿರುವುದಿಲ್ಲ. ಎಷ್ಟು ಹೊತ್ತಾದರೂ ಮುರುಘನ್ ​ಒಳಗಡೆ ಬಾರದಿದ್ದರಿಂದ ಅನುಮಾನಗೊಂಡ ಉಳಿದ ಮೀನುಗಾರರು ಸಮುದ್ರದಲ್ಲಿ ಮುರುಘನನ್ನು ಹುಡುಕಲು ಆರಂಭಿಸುತ್ತಾರೆ. ಆದರೆ ಎರಡು ದಿನ ಕಳೆದರೂ ಮುರುಘನ್​ಪತ್ತೆಯಾಗಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಘನ್​ ಮೃತಪಟ್ಟಿದ್ದಾನೆ ಎಂದು ಮಾಲಿಕನಿಗೆ ತಿಳಿಸುತ್ತಾರೆ.

ನವೆಂಬರ್ 10ರಂದು ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರರು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದು, ಗಂಗೊಳ್ಳಿಯಿಂದ ಸುಮಾರು 14 ನಾಟಿಕಲ್ ಮೈಲ್ ದೂರ ಹೋದಾಗ ಮುರುಘನ್​​ನನ್ನು ಕಂಡಿದ್ದು, ಗಂಗೊಳ್ಳಿ ಮೀನುಗಾರರು ಮೀನು ಅಂದುಕೊಂಡು ಮುರುಘನ್​ ಬಳಿ ಹೋದಾಗ ಆಶ್ಚರ್ಯವಾಗುತ್ತದೆ. ಮೀನಲ್ಲ ಮನುಷ್ಯನೆಂದು ತಿಳಿಯುತ್ತದೆ. ಕೊನೆಗೆ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ರಕ್ಷಣೆ ಮಾಡುತ್ತಾರೆ. ಜೀವ ಉಳಿಸಿಕೊಳ್ಳಲು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಮುರುಘನ್​ ನಿತ್ರಾಣಗೊಂಡಿದ್ದನು. ಸರಿಸುಮಾರು ಎರಡು ದಿನಗಳ ಕಾಲ ನಿರಂತರವಾಗಿ ಈಜಿ ಬಸವಳಿದಿದ್ದ ಮೀನುಗಾರ ಮುರುಘನ್​​ನನ್ನು ರಕ್ಷಣೆ ಮಾಡಲಾಗಿದೆ.

- Advertisement -

Related news

error: Content is protected !!