Saturday, June 28, 2025
spot_imgspot_img
spot_imgspot_img

ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದು ವರ್ಷದ ಪುಟಾಣಿ

- Advertisement -
- Advertisement -

ಸುಬ್ರಹ್ಮಣ್ಯ: ಭಕ್ತರೊಬ್ಬರು ಕಳೆದುಕೊಂಡ ಹಣವನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರಿಸಿದ ಘಟನೆ ಶ್ರೀ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಶ್ರೀಧರ ಎಂಬವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಕೆ ತೀರಿಸಲು ಬಂದಿದ್ದರು.ಈ ಸಂದರ್ಭ ತಮ್ಮ ಬ್ಯಾಗ್ ನಲ್ಲಿದ್ದ ಸುಮಾರು ಐವತ್ತು ಸಾವಿರ ನೋಟಿನ ಕಂತೆ ಆಕಸ್ಮಿಕವಾಗಿ ಬಿದ್ದು ಹೋಗಿತ್ತು.

ದೇಗುಲದ ಜಮಾ ಉಗ್ರಾಣ ಬಳಿ ಇರುವ ಹಣ್ಣು ಕಾಯಿ ಅಂಗಡಿ ಬಳಿಯಲ್ಲಿ ಬಿದ್ದಿದ್ದ ಈ ನೋಟಿನ ಕಂತೆ ಪಂಜ ಚಿಮುಳ್ಳು ನಿವಾಸಿ ಚಂದ್ರಾವತಿ ಎಂಬವರ ಮಗಳು ಐದು ವರ್ಷದ ಪುಟಾಣಿ ಕೈಗೆ ಸಿಕ್ಕಿದೆ .ತಕ್ಷಣ ವಾರಿಸುದಾರರ ಮಾಹಿತಿ ಪಡೆದ ಬಾಲಕಿಯ ಪೋಷಕರು ಸ್ಥಳೀಯ ಹಣ್ಣುಕಾಯಿ ಅಂಗಡಿ ಮಾಲೀಕರ ಸಮ್ಮುಖದಲ್ಲಿ ಹಣ ಕಳಕೊಂಡ ಭಕ್ತನಿಗೆ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

- Advertisement -

Related news

error: Content is protected !!