Saturday, May 18, 2024
spot_imgspot_img
spot_imgspot_img

ಉಡುಪಿ: ಐವರ ತಂಡದಿಂದ ರಿಕ್ಷಾ ಚಾಲಕನಿಗೆ ಹಲ್ಲೆ

- Advertisement -G L Acharya panikkar
- Advertisement -

ಉಡುಪಿ: ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಡಿ.25ರಂದು ತಡರಾತ್ರಿ ಕಲ್ಸಂಕ ಬಳಿ ನಡೆದಿದೆ.

ಹಲ್ಲೆಗೊಳಗಾದವರನ್ನು ರಿಕ್ಷಾ ಚಾಲಕ, ಪುತ್ತೂರು ಅಡ್ಕದಕಟ್ಟೆಯ ಮಂಜು ನಾಥ(40) ಎಂದು ಗುರುತಿಸಲಾಗಿದೆ. ಇವರು ರಿಕ್ಷಾ ಚಲಾಯಿಸಿಕೊಂಡು ಬರುತ್ತಿರುವಾಗ ರಸ್ತೆ ಬದಿ ಎರಡು ಬೈಕ್ 5 ಮಂದಿ ಯುವಕರು ಬಾಟಲಿ ಯನ್ನು ರಸ್ತೆಯ ಮೇಲೆ ಬಿಸಾಡಿದ್ದರು.
ಇದನ್ನು ಪ್ರಶ್ನಿಸಿದಕ್ಕಾಗಿ ಮಂಜುನಾಥ್ ಅವರಿಗೆ ಐವರ ತಂಡ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಅವರು ಬೊಬ್ಬೆ ಹಾಕಿದಾಗ ಆರೋಪಿಗಳು ತಮ್ಮ ಎರಡು ಬೈಕಿನಲ್ಲಿ ಅಲ್ಲಿಂದ ಪರಾರಿಯಾದರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!