- Advertisement -
- Advertisement -




ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ.
ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
- Advertisement -