- Advertisement -
- Advertisement -
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೈತಖೋಲ್ ಪ್ರದೇಶದಲ್ಲಿ ನಡೆದಿದೆ. ಯುವಕರ ಗುಂಪೊಂದು ರಸ್ತೆಬದಿಯಲ್ಲಿ ಪುಂಡಾಟ ನಡೆಸುತ್ತಿದ್ದು, ಈ ವೇಳೆ ಮನೆಗೆ ತೆರಳಿ ಎಂದು ಬುದ್ದಿ ಹೇಳಿದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಭಾಗಿಯಾದ ಸುಮಾರು 11 ಜನರನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -