Monday, April 29, 2024
spot_imgspot_img
spot_imgspot_img

ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್‌ಕಾನ್ಸ್‌ಟೇಬಲ್‌ ಮೇಲೆ ಟ್ರ್ಯಾಕ್ಟರ್ ಹರಿಸಿ ಭೀಕರ ಹತ್ಯೆ

- Advertisement -G L Acharya panikkar
- Advertisement -
vtv vitla

ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯ ಮೇರೆಗೆ, ತಡೆಯಲು ತೆರಳಿದ್ದ ಹೆಡ್‌ಕಾನ್ಸ್‌ಟೇಬಲ್ ಮೇಲೆಯೇ ಟ್ರ್ಯಾಕ್ಟರ್ ಹರಿಸಿ ಹತ್ಯೆಗೈದಿರುವಂತ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದೆ.

ಗುಲ್ಬರ್ಗಾ ಜಿಲ್ಲೆಯ ನೆಲೋಗಿ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಮೈಸೂರು ಚೌಹಾಣ್ (51) ಎಂಬವರನ್ನು ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಲಾಗಿದೆ.

ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಅಕ್ರಮ ಮರಳು ಸಾಗಾಣಿಕೆ ಮಾಡಲಾಗುತ್ತಿದೆ ಎಂಬುದಾಗಿ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಸ್ಥಳಕ್ಕ ತೆರಳಿದ್ದರು.

ಅಕ್ರಮವಾಗಿ ಟ್ರ್ಯಾಕ್ಟರ್ ಮೂಲಕ ಮರಳು ಸಾಗಾಣಿಕೆ ಮಾಡುತ್ತಿದ್ದದ್ದು ಕಂಡು ತಡೆದಿದ್ದರು. ಈ ವೇಳೆ ಹೆಡ್‌ಕಾನ್ಸ್‌ಟೇಬಲ್ ಮೈಸೂರು ಚೌಹಾನ್ ಅವರ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಲಾಗಿದೆ. ಅಕ್ರಮ ಮರಳು ಸಾಗಾಣಿಕೆ ದಂಧೆಕೋರರು ಟ್ರ್ಯಾಕ್ಟರ್ ಹರಿಸಿದ ಪರಿಣಾಮ, ಸ್ಥಳದಲ್ಲಿಯೇ ಹೆಡ್‌ಕಾನ್ಸ್‌ಟೇಬಲ್ ಚೌಹಾಣ್ ತೀವ್ರ ರಕ್ತಸ್ರಾವದೊಂದಿಗೆ ಸಾವನ್ನಪ್ಪಿದ್ದಾರೆ.

ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!