- Advertisement -
- Advertisement -
ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ನಡೆದಿದೆ.
ಮೈಸೂರಿನ ಮುಜಾಮಿಲ್ ಅಹಮದ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಕಿ ಹತ್ತಿಕೊಂಡ ಪರಿಣಾಮ ಟೆಂಪೋ ಮುಂಭಾಗವು ಸುಟ್ಟು ಕರಕಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -