- Advertisement -
- Advertisement -
ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ತುಕಾರಾಂ ಕಮ್ಮಾರ (26) ಹಾಗೂ ಗಂಭೀರ ಗಾಯಗೊಂಡ ಇನ್ನೋರ್ವ ಬೈಕ್ ಸವಾರ ಮಲ್ಲೇಶ ಹರಿಜನ್ ಎಂದು ಗುರುತಿಸಲಾಗಗಿದೆ.
ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನು ಬೈಕ್ ಮುಖಾಮುಖಿ ಡಿಕ್ಕಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -