Saturday, April 27, 2024
spot_imgspot_img
spot_imgspot_img

ಉಳ್ಳಾಲ: ಹಿಟ್‌ ಆಂಡ್ ರನ್‌ ಪ್ರಕರಣ ; ಬೈಕ್‌ ಸವಾರ ಗಂಭೀರ

- Advertisement -G L Acharya panikkar
- Advertisement -

ಉಳ್ಳಾಲ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರಿನೊಂದಿಗೆ ಚಾಲಕ ಪರಾರಿಯಾಗಿರುವ ಹಿಟ್ ಆಂಡ್ ರನ್ ಪ್ರಕರಣ ರಾಷ್ಟ್ರೀಯ ಹೆದ್ದಾರಿ 66ರ ಸಂಕೋಳಿಗೆ ಸಮೀಪ ಜೂ.4ರ ತಡರಾತ್ರಿ ನಡೆದಿದೆ. ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು.

ಬೈಕ್ ಸವಾರ ತೇಜಸ್ ಕೋಟೆಕಾರಿನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ತೇಜಸ್ ಅವರನ್ನು ತಕ್ಷಣ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಪರಾರಿಯಾಗಿರುವ ಕಾರು ಕೇರಳದ ನೋಂದಾವಣೆ ಹೊಂದಿದೆ ಎಂದು ಸಿಸಿಟಿವಿ ದೃಶ್ಯದಿಂದ ಪತ್ತೆಹಚ್ಚಲಾಗಿದೆ. ಪ್ರಕರಣ ದಾಖಲಿಸಿಕೊಂಡ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ತನಿಖೆ ನಡೆಸಿ, ತಲಪಾಡಿ ಟೋಲ್ ಗೇಟ್‌ನ ಸಿಸಿಟಿವಿ ಪರಿಶೀಲಿಸಿದಾಗ ಕೇರಳ ನೋಂದಾಯಿತ ಇನೋವಾ ಕಾರು ಘಟನೆಗೆ ಕಾರಣವಾಗಿರುವುದನ್ನು ಪತ್ತೆಹಚ್ಚಿದ್ದಾರೆ.

- Advertisement -

Related news

error: Content is protected !!