Saturday, June 28, 2025
spot_imgspot_img
spot_imgspot_img

ಕೌಟುಂಬಿಕ ಕಲಹ; ಪತ್ನಿಯ ಕತ್ತು ಸೀಳಿ ಭೀಕರ ಹತ್ಯೆಗೈದ ಪತಿ-ಅನಾಥರಾದ ಮಕ್ಕಳು..!!

- Advertisement -
- Advertisement -

ಗಂಡ ಹೆಂಡತಿಯ ನಡುವಿನ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ಮುರುಡೇಶ್ವರದ ತೇರ್ನಾಮಕ್ಕಿಯಲ್ಲಿ ನಡೆದಿದೆ. ನಂದಿನಿ(30) ಕೊಲೆಯಾದ ಮಹಿಳೆ. ಲೋಕೇಶ್‌ ನಾಯ್ಕ್‌ ಎಂಬಾತ ಆರೋಪಿ.

ನಂದಿನಿ ಹಾಗೂ ಲೋಕೇಶ್‌ ನಾಯ್ಕ್‌ ದಂಪತಿ ಓರ್ವ ಪುತ್ರ ಹಾಗೂ ಮಗಳೊಂದಿಗೆ ಕಳೆದ ಮೂರು ದಿನಗಳ ಹಿಂದಷ್ಟೇ ಸಬ್ಬತ್ತಿ ಕ್ರಾಸ್‌ನಲ್ಲಿರುವ ಬಾಡಿಗೆ ಮನೆಗೆ ಬಂದು ವಾಸವಾಗಿದ್ದರು. ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದ್ದು ಈ ವೇಳೆ ಕುಪಿತನಾದ ಲೋಕೇಶ್‌ ನಂದಿನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ನಂದಿನಿ ರಕ್ತದ ಮಡುವಿನಲ್ಲೇ ಮನೆಯಿಂದ ಹೊರಗೆ ಓಡಿಬಂದು ನೆಲಕ್ಕೆ ಬಿದ್ದು ಪ್ರಾಣಬಿಟ್ಟಿದ್ದಾಳೆ.

ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆಯನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ದೌಡಾಯಿಸಿ ಪರಿಶೀಲನೆ ನಡೆಸಿ ಬಳಿಕ ಆರೋಪಿ ಪತಿ ಲೋಕೇಶ ನಾಯ್ಕನನ್ನು ಖಾಸಗಿ ಹೋಟೆಲೊಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕೇಶ ನಾಯ್ಕ ಶಿಲ್ಪಿ ಕೆಲಸ ಮಾಡುತ್ತಿದ್ದರೆ, ನಂದಿನಿ ಮನೆಯಲ್ಲಿರುತ್ತಿದ್ದರು. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿಗಳ ಕಲಹದಲ್ಲಿ ಎರಡು ಮಕ್ಕಳು ಇದೀಗ ಅನಾಥವಾಗಿವೆ.

- Advertisement -

Related news

error: Content is protected !!