Saturday, May 17, 2025
spot_imgspot_img
spot_imgspot_img

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ತನ್ನ ಪ್ರಾಣವನ್ನೇ ತೆತ್ತ ಉಪನ್ಯಾಸಕಿ

- Advertisement -
- Advertisement -

ಮಂಗಳೂರು : ಸಂಬಂಧಿಯ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ.

ನಗರದ ಕರಂಗಲ್ಪಾಡಿ ನಿವಾಸಿ, ಮಂಗಳೂರಿನ ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುರ್ದೈವಿ.

ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ.

ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಅರ್ಚನಾ ದಿಢೀರ್‌ ಅಸ್ವಸ್ಥಗೊಂಡಿದ್ದು, ಸೆ.15ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲಿವರ್‌ ಕಸಿ ಮಾಡಿಸಿಕೊಂಡಿರುವ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!