- Advertisement -
- Advertisement -
ಕಣ್ಣೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ ಬಳಿ ನಡೆದಿದೆ
ಮೃತರನ್ನು ಮಹಮ್ಮದ್ ರಶೀದ್ (27) ಎಂದು ಗುರುತಿಸಲಾಗಿದೆ.
ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ ಬಳಿ ಭಾನುವಾರ ಬೆಳಗಿನ ಜಾವ 2:00 ಗಂಟೆ ಸುಮಾರಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಕರ್ನಾಟಕದಿಂದ ಕಣ್ಣೂರಿಗೆ ತರಕಾರಿ, ಹಣ್ಣು ತರುವ ಕೆಲಸ ಮಾಡುತ್ತಿದ್ದರು. ಎಂದಿನಂತೆ ತರಕಾರಿ ಖರೀದಿಸಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.ಪೊಲೀಸರು ಸ್ಥಳಕ್ಕಾಗಮಿಸಿ ಮಹಮ್ಮದ್ ರಶೀದ್ ನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು
- Advertisement -