Sunday, May 19, 2024
spot_imgspot_img
spot_imgspot_img

ಕಾರಿಗೆ ಡಿಕ್ಕಿ ಹೊಡೆದ ಲಾರಿ ; ನಾಲ್ವರು ಗಂಭೀರ..!

- Advertisement -G L Acharya panikkar
- Advertisement -

ಕಾರಿಗೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಭೋಸಗಾ ಕ್ರಾಸ್ ಬಳಿ ನಡೆದಿದೆ.

ಗಾಯಗೊಂಡವರು ವಿರಕ್ತ ಮಠದ ಶಿವಲಿಂಗ ದೇವರು, ಆಕಾಶ್, ಶಿವಕುಮಾರ್, ಚಾಲಕ ಪಂಚಾಕ್ಷರಯ್ಯ ಎಂದು ಗುರುತಿಸಲಾಗಿದೆ.

ಏಕಾಏಕಿ ಬಂದ ಟಿಪ್ಪರ್‌ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯ ಅಡಿ ಸಿಲುಕಿ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್​​ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಲಬುರಗಿ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಟಿಪ್ಪರ್ ಚಲಾಯಿಸಿದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!