Saturday, June 28, 2025
spot_imgspot_img
spot_imgspot_img

ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಮೃತ್ಯು

- Advertisement -
- Advertisement -

ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಸಂಭವಿಸಿದೆ.

ಬೆಂಗಳೂರು- ಮುಂಬಯಿ ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಬಳಿ ನಡೆದ ಈ ಭೀಕರ ಸರಣಿ ಅಪಘಾತದಲ್ಲಿ ಹಾಸನ ‌ಮೂಲದ ಮೂವರು ಮತ್ತು ಬೆಂಗಳೂರಿನ ಓರ್ವ ಸಾವನ್ನಪ್ಪಿದ್ದಾರೆ. ಮಣಿಕಂಠ (26), ಪವನ (23), ಚಂದನ (31) ಮತ್ತು ಪ್ರಭು (34) ಮೃತ ಪಟ್ಟವರು ಎಂದು ಗುರುತಿಸಲಾಗಿದೆ.

ಇನ್ನೂ ಇಬ್ಬರಿಗೆ ಗಾಯಗಳಾಗಿವೆ. ಎರಡು ಕಾರುಗಳು ನಿಂತಿದ್ದಾಗ ಅವುಗಳಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿಯಾಗಿ ಮಂಜು ಮುಸುಕಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

- Advertisement -

Related news

error: Content is protected !!