Wednesday, May 15, 2024
spot_imgspot_img
spot_imgspot_img

ಚಾರ್ಮಾಡಿ ಘಾಟ್‌ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ದಟ್ಟವಾಗಿದ್ದ ಮಂಜಿನಿಂದ ದಾರಿ ಕಾಣದ ಪರಿಣಾಮ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಬಿದ್ದು ಉರುಳಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ನಡೆದಿದೆ.

ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಪ್ರಪಾತಕ್ಕೆ ಉರುಳಿದೆ ಈ ವೇಳೆ ಅಲ್ಲಿ ಇದ್ದ ಮರಕ್ಕೆ ಲಾರಿ ಸಿಲುಕಿಕೊಂಡಿದೆ. ಇದರಿಂದಾಗಿ ಅದೃಷ್ಟವಶಾತ್‌ ಚಾಲಕ ಹಾಗೂ ಕ್ಲೀನರ್‌ ಪಾರಾಗಿದ್ದಾರೆ. ಸ್ಥಳೀಯರು ರಕ್ಷಣೆ ನೆರವಾಘಿದ್ದು, ಘಟನಾ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

- Advertisement -

Related news

error: Content is protected !!