- Advertisement -
- Advertisement -



ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಎನ್ನಲಾಗಿದ್ದು. ಘಟನೆಯಲ್ಲಿ ಮಂಜುನಾಥ್ ಅವರ ತಂದೆಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಂಜುನಾಥ್ ಲಾರಿಯ ಅಡಿಯಲ್ಲಿ ಸಿಲುಕಿದ್ದು ಸುಮಾರು ದೂರ ಎಳೆದೊಯ್ದ ಲಾರಿ ಬಳಿಕ ಪಲ್ಟಿಯಾಗಿ ಬಿದ್ದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -