- Advertisement -
- Advertisement -
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.
ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಡಿಯೂರಿಗೆ ಬರುತ್ತಿದ್ದ ಮಾರ್ಬಲ್ ಲಾರಿ ಇಳಿಜಾರು ರಸ್ತೆಯಲ್ಲಿ ಬ್ರೇಕ್ ಫೈಲ್ ಆಗಿ ನೇರವಾಗಿ ದೇವಸ್ಥಾನದ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
- Advertisement -