Saturday, April 27, 2024
spot_imgspot_img
spot_imgspot_img

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಸರ್ಕಾರಿ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬೇಲೂರಿನ ಅರುಣ್ (28) ಎಂದು ಗುರುತಿಸಲಾಗಿದೆ.

ಅರುಣ್‌ ಆಲೂರು ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಆಗಿದ್ದ ಹಿನ್ನೆಲೆಯಲ್ಲಿ ವಿಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅರುಣ್‌ ತಾಯಿ ಸರ್ಕಾರಿ ನೌಕರಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಕೆ ಮೃತಪಟ್ಟಿದ್ದರಿಂದ ಅರುಣ್‌ಗೆ ಸರ್ಕಾರಿ ನೌಕರಿ ದೊರಕಿತ್ತು. ಆದರೆ ತಾನಿದ್ದ ಮನೆಯಲ್ಲೇ ಅರುಣ್‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರುಣ್‌ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!