Tuesday, May 21, 2024
spot_imgspot_img
spot_imgspot_img

ಉಳ್ಳಾಲ: ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು..!

- Advertisement -G L Acharya panikkar
- Advertisement -

ಉಳ್ಳಾಲ: ಕೊಣಾಜಿ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲದ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ನಡೆದಿದೆ.

ಮೃತಪಟ್ಡ ವ್ಯಕ್ತಿ ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಎಂದು ಗುರುತಿಸಲಾಗಿದೆ.

ಎಂದಿನಂತೆ ಬೆಳಿಗ್ಗೆ, ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!