- Advertisement -
- Advertisement -



ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ಮೊಸಳೆಯ ಬಾಯಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ.
ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ದುರ್ದೈವಿ.
ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು. ಸ್ನಾನ ಮಾಡುತ್ತಿದ್ದ ಸಂಧರ್ಭದಲ್ಲಿ ಮಹಾದೇವ ಖುರೆಯವರನ್ನು ಮೊಸಳೆ ಎಳೆದುಕೊಂಡು ಹೋಗಿ ತೀವ್ರವಾಗಿ ಗಾಯಮಾಡಿದೆ. ಪರಿಣಾಮ ಮಹಾದೇವ ಖುರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
- Advertisement -