- Advertisement -
- Advertisement -
ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಮೆಟ್ರೋ ಹಳಿ ಮೇಲೆ ಜಿಗಿದಿರುವಂತಹ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್ನಲ್ಲಿ ನಡೆದಿದೆ.
ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿಗಳು ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಪರದಾಡಿದ್ದಾರೆ.
ಸದ್ಯ ಮೆಜಸ್ಟಿಕ್ನಿಂದ ಯಶವಂತಪುರವರೆಗೆ ಮಾತ್ರ ಮೆಟ್ರೋ ರೈಲು ಸಂಚಾರ ಮಾಡುತ್ತಿವೆ. ಯಶವಂತಪುರದಿಂದ ನಾಗಸಂದ್ರವರೆಗೆ ಮೆಟ್ರೋ ರೈಲು ಸಂಚಾರ ಮಾಡುತ್ತಿಲ್ಲ. ಅರ್ಧ ಗಂಟೆಯಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Advertisement -