Saturday, June 28, 2025
spot_imgspot_img
spot_imgspot_img

ಸುರತ್ಕಲ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರ

- Advertisement -
- Advertisement -

ಸುರತ್ಕಲ್ : ಏಕಾಏಕಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮಾರಿಗುಡಿ ಎದುರು ನಡೆದಿದೆ.

ಗಾಯಗೊಂಡವರನ್ನು ಸುಕೇಶ(40) ಎಂದು ತಿಳಿದು ಬಂದಿದ್ದು, ಅವರ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಸ್ ಕೇರಳದ ಪ್ರಯಾಣಿಕರನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕರೆದೊಯ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬಿಡಲು ತೆರಳುತ್ತಿದ್ದು, ಈ ವೇಳೆ ಬಸ್ ಸುರತ್ಕಲ್ ಮಾರಿಗುಡಿ ಎದುರು ತಲುಪಿದಾಗ ವ್ಯಕ್ತಿಯೋರ್ವ ರಸ್ತೆ ದಾಟಿದ್ದು, ಬಸ್ ಆತನಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಪಾದಚಾರಿಗೆ ಗಂಭೀರ ಗಾಯಗಳಾಗಿದ್ದು, ಸಮಿಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು, ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!