- Advertisement -
- Advertisement -





ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ.
ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಭಾರತಿ (35) ನಾಪತ್ತೆಯಾದ ಮಹಿಳೆ,
ಜು.7ರಂದು ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಭಾರತಿ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆಂದು ಭಾವಿಸಿದ್ದೆ. ಆದರೆ ಆ ಬಳಿಕ ಪತ್ನಿ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈಗ ಪತ್ನಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪತಿ ಸೆ.6ರಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
- Advertisement -