Saturday, May 18, 2024
spot_imgspot_img
spot_imgspot_img

ಮೊಸಳೆಗಳಿರುವ ನಾಲೆಗೆ ಮಗುವನ್ನು ಎಸೆದ ತಾಯಿ; ಮೃತದೇಹ ಪತ್ತೆ..!

- Advertisement -G L Acharya panikkar
- Advertisement -

ಗಂಡನ ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ.

ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯಾಗಿದ್ದು, ಮೊಸಳೆ ಬಾಯಿಗೆ ಸಿಲುಕಿ ಮೃತ ಬಾಲಕ ವಿನೋದ್ (6) ಎಂದು ಗುರುತಿಸಲಾಗಿದೆ.

ಗಂಡ ರವಿಕುಮಾರ್ ಮೇಲಿನ ಕ್ಷುಲ್ಲಕ ಕಾರಣಕ್ಕೆ ಕೋಪಿಸಿಕೊಂಡು ಜಗಳ ತೆಗೆದಿದ್ದ ಸಾವಿತ್ರಿ ಕೋಪದಲ್ಲಿ ಮಗುವನ್ನು ಮನೆಯ ಬಳಿ ಇದ್ದ ಮೊಸಳೆಗಳಿದ್ದ ನಾಲೆಗೆ ಎಸೆದಿದ್ದಾಳೆ. ನಂತರ ಪಶ್ಚಾತ್ತಾಪದಿಂದ ತನ್ನ ತಪ್ಪಿನ ಅರಿವಾಗಿ ತಾನು ಮಾಡಿದ ಕೃತ್ಯವನ್ನು ತಿಳಿಸಿದ್ದಾಳೆ. ನಂತರ ಬಾಲಕನಿಗಾಗಿ ಶೋಧ ನಡೆಸಿದ್ದು ಈ ವೇಳೆ ಮೊಸಳೆ ಬಾಯಲ್ಲಿ ಸಾವಿಗೀಡಾದ ಮಗುವಿನ ಶವ ಪತ್ತೆಯಾಗಿದೆ. ಈ ಸಂಬಂಧ ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!