Saturday, May 18, 2024
spot_imgspot_img
spot_imgspot_img

ಲವ್ ಜಿಹಾದ್; ಕ್ರಿಶ್ಚಿಯನ್ ಎಂದು ನಂಬಿಸಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಮುಸ್ಲಿಂ ಯುವಕ-ರಕ್ಷಣೆಗಾಗಿ ಪೊಲೀಸ್‌ ಮೊರೆ ಹೋದ ಯುವತಿ

- Advertisement -G L Acharya panikkar
- Advertisement -

ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

ತಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡು ಹಿಂದೂ ಯುವತಿಯನ್ನು ಬಲೆಗೆ ಬಿಳಿಸಿದ್ದ ಕಿರಾತಕ ಮುಸ್ಲಿಂ ಎಂಬ ವಿಚಾರ ತಿಳಿಯುತ್ತಿದ್ದಂತೆ ಲವ್ ಜಿಹಾದ್ ಶಂಕಿಸಿ ಯುವತಿ ಎಚ್ಚೆತ್ತುಕೊಂಡು ಬಚಾವ್ ಆಗಿದ್ದಾಳೆ. ಆದರೆ ನಯವಂಚಕ ನೀಡುತ್ತಿದ್ದ ಕಿರುಕುಳ ತಾಳಲಾರದೆ ರಕ್ಷಣೆ ಮತ್ತು ನ್ಯಾಯಕ್ಕಾಗಿ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಎಂಬ ಕಿರಾತಕ ಯುವತಿಯನ್ನ ವಂಚಿಸಿದ್ದಾ‌ನೆ.

ರೈಮಂಡ್ ಮತ್ತು ಬ್ಲಾಕ್ ಬೇರಿಸ್ ಗಾರ್ಮೆಂಟ್ಸ್ ರಿಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಆ ಯುವಕ-ಯುವತಿ ನಗರದಲ್ಲಿ ವಾಸವಾಗಿದ್ದರು. ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರಿಂದ ಪ್ರಾರಂಭದಲ್ಲಿ ತಾನು ಕ್ರಿಶ್ಚಿಯನ್ ಧರ್ಮದ ಮೆಲ್ಬಿನ್ ಎಂದು ಹೆಸರು ಹೇಳಿಕೊಂಡು ಯುವತಿಯನ್ನು ಬಲೆಗೆ ಬೀಳಿಸಿಕೊಂಡಿದ್ದಾನೆ. ಮಾತು ನಂಬಿದ ಯುವತಿ ಎರಡು ವರ್ಷದಿಂದ ಪರಸ್ಪರ ಪ್ರೀತಿ, ಒಡನಾಟದಲ್ಲಿದ್ದಾಳೆ.

ಒಂದು ದಿನ ಯುವಕನ ಪರ್ಸ್ ನಲ್ಲಿದ್ದ ಆಧಾರ್ ಕಾರ್ಡ್ ಆಕಸ್ಮಿಕವಾಗಿ ಯುವತಿಯ ಕಣ್ಣಿಗೆ ಬಿದ್ದಿದೆ. ಯುವತಿ ಆತನನ್ನ ಪ್ರಶ್ನೆ ಮಾಡುತ್ತಿದ್ದಂತೆ, ತಾನು ಮುಸ್ಲಿಂ ಎಂದು ಹೇಳಿದರೆ ಯುವತಿ ಸ್ನೇಹ ಬೆಳೆಸುವುದಿಲ್ಲ. ಅದಕ್ಕಾಗಿ ಕ್ರಿಶ್ಚಿಯನ್ ಎಂದು ಸುಳ್ಳು ಹೇಳಿರೋದಾಗಿ ಬಾಯ್ಬಿಟ್ಟಿದ್ದಾನೆ. ತನ್ನ ಪ್ರೇಮಿ ಅನ್ಯ ಕೋಮಿನ ಯುವಕ ಎಂದು ತಿಳಿದ ಬಳಿಕ ಕೂಡಲೇ ಎಚ್ಚೆತ್ತ ಯುವತಿ, ಬ್ರೇಕಪ್ ಮಾಡಿಕೊಂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಯುವಕ ಯುವತಿಗೆ ಕಿರುಕುಳ ನೀಡಲು ಶುರು ಮಾಡಿಕೊಂಡಿದ್ದಾನೆ. ರಾತ್ರಿ ವೇಳೆ ಮನೆ ಬಳಿ ಬಂದು ಗಲಾಟೆ ಮಾಡಿ ಯುವತಿ ಮತ್ತು ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾನೆ‌ ಎನ್ನುವ ಆರೋಪಗಳು ಕೇಳಿಬಂದಿವೆ. ನೊಂದ ಯುವತಿ ಹೆಬ್ಬಗೋಡಿ ಠಾಣೆಯಲ್ಲಿ ಅಲ್ ಮೆಹಪ್ಯೂಸ್ ಬರಪೂಯಾನ ವಿರುದ್ಧ ದೂರು ದಾಖಲಿಸಿದ್ದಾಳೆ.

ತನ್ನ ಧರ್ಮವನ್ನು ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಗೆ ಪ್ರೀತಿಯ ಹೆಸರಿನಲ್ಲಿ ವಂಚಿಸಿದ್ದಲ್ಲದೆ, ಯುವತಿಯ ಬಳಿ ಲಕ್ಷಾಂತರ ರೂಪಾಯಿ ಹಣವನ್ನು ಸಹ ಪಡೆದುಕೊಂಡಿದ್ದ. ಇದೇ ರೀತಿ ಈ ಹಿಂದೆಯೂ ಸಹ ಸಾಕಷ್ಟು ಯುವತಿಯರಿಗೆ ಸುಳ್ಳು ಹೇಳಿ ವಂಚನೆ ಮಾಡಿದ್ದಾನೆ ಎನ್ನುವ ಆರೋಪಗಳು ಸಹ ಈಗ ಕೇಳಿಬಂದಿವೆ. ಅಷ್ಟೇ ಅಲ್ಲದೆ ಆಕೆ ಕೆಲಸ ಮಾಡುತ್ತಿದ್ದ ಬ್ಲಾಕ್ ಬೇರಿಸ್ ಕಂಪನಿ ಮಾಲೀಕರ ಬಳಿ ಇಲ್ಲಸಲ್ಲದ ಆರೋಪ ಮಾಡಿ ಯುವತಿಯನ್ನು ಕೆಲಸದಿಂದ ತೆಗೆಸಿದ್ದ ಎನ್ನುವ ಆರೋಪವನ್ನು ನೊಂದ ಯುವತಿ ಮಾಡುತ್ತಿದ್ದಾಳೆ.

ಮಾತ್ರವಲ್ಲದೆ ಅಲ್ ಮೆಹಪ್ಯೂಸ್ ಬರಪೂಯಾ ಯುವತಿ ಜೊತೆ ಕೆಲಸ ಮಾಡುವ ಅನ್ಯಕೋಮಿನ ಕೆಲವರ ಜೊತೆ ಸೇರಿ ಷಡ್ಯಂತ್ರ ರೂಪಿಸಿ ಯುವತಿಯ ಪ್ರೊಫೆಷನಲ್ ಲೈಫ್​ ಹಾಳು ಮಾಡಿದ್ದಾನೆಂದು ನೊಂದ ಯುವತಿ ಆರೋಪಿಸಿದ್ದಾಳೆ. ಇಷ್ಟೆಲ್ಲಾ ವಂಚನೆಗೊಳಗಾದ ಯುವತಿ ನ್ಯಾಯಕ್ಕಾಗಿ ಹೆಬ್ಬಗೋಡಿ ಠಾಣೆಯಲ್ಲಿ ಮತ್ತು ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಆಡಳಿತ ಮಂಡಳಿಯ ಕಿರುಕುಳದ ವಿರುದ್ಧ ಆಡುಗೋಡಿ ಠಾಣೆಯಲ್ಲಿ ನೊಂದ ಯುವತಿ ದೂರು ನೀಡಿದ್ದಾಳೆ.

- Advertisement -

Related news

error: Content is protected !!