Sunday, June 29, 2025
spot_imgspot_img
spot_imgspot_img

ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು..!

- Advertisement -
- Advertisement -

ಆಟವಾಡುತ್ತಾ ಚರಂಡಿಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಗಂಗಾವತಿ ನಗರದ ಎಪಿಎಂಸಿ ಹಮಾಲರ ಕ್ವಾಟ್ರಸ್‌ನಲ್ಲಿ ನಡೆದಿದೆ.

ಮೃತಪಟ್ಟ ಮಗು ಪವಿತ್ರಾ ಮೃತಪಟ್ಟ ಎಂದು ಗುರುತಿಸಲಾಗಿದೆ.

ಮನೆ ಬಳಿ ಮಗು ಆಟವಾಡುತ್ತಾ ಚರಂಡಿಗೆ ಬಿದ್ದಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಮಗು ಕಾಣೆಯಾಗಿರುವುದು ಪೋಷಕರ ಗಮನಕ್ಕೆ ಬಂದಿದೆ. ಈ ವೇಳೆ ಮಗುವನ್ನು ಎಲ್ಲೆಡೆ ಹುಡುಕಾಡಿದ್ದಾರೆ.ಕೊನೆಗೆ ಮಗುವಿನ ಶವ ಹತ್ತಿರ ಚರಂಡಿಯಲ್ಲಿ ಪತ್ತೆಯಾಗಿದೆ. ಚರಂಡಿ ಮುಚ್ಚದೆ ಹಾಗೇ ಬಿಟ್ಟು ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಕ್ಕೆ ಮಗು ಬಲಿಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

- Advertisement -

Related news

error: Content is protected !!