- Advertisement -
- Advertisement -
ಕ್ರೀಡಾಕೂಟ ನೋಡಲು ಬಂದಿದ್ದ ಗ್ರಾ.ಪಂ. ಸಿಬ್ಬಂದಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಯಲಬುಲರ್ಗಾ ತಾಲೂಕಿನ ಮುಧೋಳ ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ವಿನೋದ ಕರಿಸಿದ್ದಪ್ಪ ಮ್ಯಾಗೇರಿ(28) ಎಂದು ಗುರುತಿಸಲಾಗಿದೆ.
ಕ್ರೀಡಾಕೂಟವನ್ನು ವೀಕ್ಷಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ವಿನೋದ್ ಅವರನ್ನು ಸ್ಥಳದಲ್ಲಿದ್ದ ಅಂಬುಲೆನ್ಸ್ ಬಳಿ ಕರೆದೊಯ್ಯುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ರದ್ದುಗೊಳಿಸಲಾಗಿದೆ.
- Advertisement -