- Advertisement -
- Advertisement -
ಕಡಬ: ತೋಟದಲ್ಲಿ ಕೆಲಸ ಮಾಡಿ ಊಟ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ನಾಗರಹಾಲ ಗ್ರಾಮದ ನಿರುಪಾದಿ ಘಟನೂರು(44) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಕುಟ್ರುಪ್ಪಾಡಿ ಗ್ರಾಮದ ಕೊಲ್ಯದ ಕಟ್ಟೆ ಎಂಬಲ್ಲಿ ಸಿ.ಪಿ.ಸೈಮನ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದು ನಂತರ ಕೆಲಸದವರೊಂದಿಗೆ ಊಟ ಮಾಡುತ್ತಿದ್ದ ವೇಳೆ ಒಮ್ಮೇಲೆ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ಕೆಲಸಗಾರರಾದ ಹಾರೀಸ್ ಹಾಗೂ ಯಶೋದರ ಅವರು ಉಪಚರಿಸಿ ಜೀಪಿನಲ್ಲಿ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಲ್ಲಿ ವೈದ್ಯರು ಪರಿಕ್ಷೀಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮೃತ ನಿರುಪಾದಿಯವರ ಪತ್ನಿ ಮಹಾದೇವಿ ಎಂಬವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -