- Advertisement -
- Advertisement -
ಕಾಡಾನೆ ತುಳಿತಕ್ಕೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ರಾಮನಗರದ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರಾಜು (48) ಎಂದು ಗುರುತಿಸಲಾಗಿದೆ.
ರಾಜು ಸೇರಿದಂತೆ 3 ಮಂದಿ ಗೌಡಹಳ್ಳಿ ಸಮೀಪದ ಸಂಗಮ ಅರಣ್ಯ ಪ್ರದೇಶದ ಕಾಡಿಗೆ ಹೋಗಿದ್ದರು. ಕಾಡಿನಲ್ಲಿ ದಾರಿತಪ್ಪಿ ಹೋಗಿದ್ದರು. ಮೂವರಲ್ಲಿ ಇಬ್ಬರು ವಾಪಸ್ ಗ್ರಾಮಕ್ಕೆ ಬಂದಿದ್ದರು. ಆದರೆ, ರಾಜು ಪತ್ತೆಯಾಗಿರಲಿಲ್ಲ ಹುಡುಕಾಡಿದಾಗ ಕಾಡಾನೆ ದಾಳಿಗೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ .ಗೌಡಳ್ಳಿ ಗ್ರಾಮದಿಂದ ಸುಂಡಗಟ್ಟ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯ ಕಾವೇರಿ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -