Saturday, April 27, 2024
spot_imgspot_img
spot_imgspot_img

ಹೊಲದಲ್ಲಿ ವ್ಯಕ್ತಿ ಶವವಾಗಿ ಪತ್ತೆ..!

- Advertisement -G L Acharya panikkar
- Advertisement -

ವ್ಯಕ್ತಿಯೋರ್ವನನ್ನು ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ ದರ್ಶನ ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಈತ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದಿದ್ದಾರೆ.

ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ ದರ್ಶನ್ ಸ್ನೇಹಿತರು ರಾತ್ರಿ ಪುನಃ ಬಂದಿದ್ದಾರೆ. ಈ ಹಿನ್ನಲೆ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ದರ್ಶನ್ ಹೋಗಿದ್ದನಂತೆ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದಾನೆ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್​ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು. ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಯಾರು ಕೊಲೆಗೈದಿದ್ದಾರೆ ಎಂಬ ಮಾಹಿತಿ ಸಿಗಲಿಲ್ಲ ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!