ಹಾಪುರ್ನ ದೇವಸ್ಥಾನದಲ್ಲಿ ನಮಾಜ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.
ಅನ್ವರ್ ಬಂಧಿತ ವ್ಯಕ್ತಿ. ಈತ ಶುಕ್ರವಾರ ಬೆಳಗ್ಗೆ ಸುಮಾರು 5 ಗಂಟೆಗೆ ಚಂಡಿ ಮಂದಿರದಲ್ಲಿ ನಮಾಜ್’ ಸಲ್ಲಿಸಿದ್ದಾನೆ ಎಂದು ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ ದೇವಸ್ಥಾನದಲ್ಲಿ ಅನ್ವರ್ ನೆಲದ ಮೇಲೆ ಬಟ್ಟೆಯನ್ನು ಹರಡಿ ನಮಾಜ್ ಮಾಡಲು ಪ್ರಾರಂಭಿಸಿದನು. ಅರ್ಚಕರು ಗಮನಿಸಿ ತಡೆದಿದ್ದಾರೆ. ನಂತರ ದೇವಸ್ಥಾನದ ಆವರಣದಿಂದ ಹೊರಕ್ಕೆ ಕಳುಹಿಸಿದ್ದಾರೆ. ದೇವಸ್ಥಾನ ಸಮಿತಿಯ ಪದಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧಾರಿಸಿ ಆತನನ್ನು ಅನ್ವರ್ ಎಂದು ಗುರುತಿಸಿ ಬಂಧಿಸಲಾಗಿದೆ. ನಮಾಜ್ ಮಾಡಿದ ನಂತರ ದೇವಾಲಯವನ್ನು ಎರಡು ಬಾರಿ ಗಂಗಾಜಲದಿಂದ ಶುದ್ಧೀಕರಿಸಲಾಗಿದೆ ಎನ್ನಲಾಗಿದೆ.
ದೇವಸ್ಥಾನದಲ್ಲಿ ‘ನಮಾಜ್’ ಮಾಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.