Saturday, June 28, 2025
spot_imgspot_img
spot_imgspot_img

ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.

ರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿ ಮೃತಪಟ್ಟ ವ್ಯಕ್ತಿ ಮಂಜುನಾಥ್ (70) ಎಂದು ಗುರುತಿಸಲಾಗಿದೆ.

ಕಳೆದ ಮಾ.27 ರಂದು ಸಂಜೆ ಸಮಯ ವಾಕಿಂಗ್‌ಗೆ ಎಂದು ಮನೆಯಿಂದ ತೆರಳಿದ್ದರು. ರಾತ್ರಿ ಕಳೆದರು ಮಂಜುನಾಥ್‌ ಮನೆಗೆ ವಾಪಸ್ ಬಾರದೇ ಇದ್ದಾಗ, ಮನೆ ಮಂದಿ ಎಲ್ಲ ಕಡೆ ಹುಡುಕಾಡಿದ್ದಾರೆ. ನಂತರ ಯಾವುದೇ ಸುಳಿವು ಸಿಗದೇ ಇದ್ದಾಗ ಮಂಜುನಾಥ್‌ ಪತ್ನಿ ಸರೋಜಾ ನಿಂಬಣ್ಣನವರ್‌ ಮರುದಿನ ಮಾ.28 ರಂದು ಅರಸೀಕೆರೆ ನಗರ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು.

ಇದೀಗ ಏ.2ರಂದು ಕಂತೇನಹಳ್ಳಿ ಕೆರೆ ಪಕ್ಕದ ಪಾರ್ಕ್‌ನಲ್ಲಿ ವಾಸನೆ ಬರುತ್ತಿತ್ತು. ಈ ವೇಳೆ ಪರಿಶೀಲನೆ ನಡೆಸಿದಾಗ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜುನಾಥ್ ಅವರ ಮೃತದೇಹ ಪತ್ತೆಯಾಗಿದೆ. ಕೂಡಲೇ ವಾಯು ವಿಹಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಮೇಲೆ ಇದು ಕೊಲೆನಾ ಅಥವಾ ಆಕಸ್ಮಿಕ ಸಾವಾ ಎಂಬುದುರ ಕುರಿತು ತಿಳಿಯಲಿದೆ. ಸದ್ಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!