- Advertisement -
- Advertisement -
ಮಂಗಳೂರು: ವಿಚಾರಣಾಧೀನ ಖೈದಿಯೊಬ್ಬ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕೇರಳದ ಕಾಸರಗೋಡಿನ ವಿಚಾರಣಾಧೀನ ಖೈದಿಯಾಗಿದ್ದ ಮುಹಮ್ಮದ್ ನೌಫಲ್ ( 26 )ಅವರು ನ್ಯಾಯಾಂಗ ಬಂಧನದಲ್ಲಿರುವಾಗಲೇ ಮೇ 6ರ ಸೋಮವಾರ ಮುಂಜಾನೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ನೌಫಲ್ 2022 ರ ಡಿಸೆಂಬರ್ 26 ರಿಂದ ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 109/2022 ರ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನೌಫಲ್ ನನ್ನು ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು.
ಸೆಲ್ ವಾರ್ಡ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -