Wednesday, May 1, 2024
spot_imgspot_img
spot_imgspot_img

ಮೂಡುಬಿದಿರೆ : ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದನರ ನಡುವಿನ ಗಲಾಟೆ; ಓರ್ವನ ಕೊಲೆ

- Advertisement -G L Acharya panikkar
- Advertisement -

ಮೂಡುಬಿದಿರೆ : ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.

ಜಮಾಲ್ ಮೃತಪಟ್ಟವರು. ಕೊಲೆ ಆರೋಪಿ ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಕಪಕ್ಕದ ಮನೆಗಳಲ್ಲಿರುವ ಇವರಿಬ್ಬರು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದಾಗ ಜಮಾಲ್ ಹೊಟ್ಟೆಗೆ ಆರೋಪಿ ಸುಹೈಬ್ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಜಮಾಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೂಡುಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!