Sunday, June 29, 2025
spot_imgspot_img
spot_imgspot_img

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ಓರ್ವ ಸವಾರಗೆ ಗಾಯ

- Advertisement -
- Advertisement -

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಕಾಮಾಜೆ ಕ್ರಾಸ್ ಎಂಬಲ್ಲಿ ಸಂಭವಿಸಿದೆ.

ಅಪಘಾತದಿಂದ ಗಾಯಗೊಂಡ ಸ್ಕೂಟರ್ ಸವಾರರನ್ನು ಚೆನ್ನೈತ್ತೋಡಿ ಗ್ರಾಮದ ವಾಮದಪದವು ನಿವಾಸಿ ರಾಮಚಂದ್ರ ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಸಂಚರಿಸುತ್ತಿರುವ ವೇಳೆ ಕಾಮಾಜೆ ಕ್ರಾಸ್ ಬಳಿ ರಫೀಝ್ ಇಸ್ಮಾಯಿಲ್ ಅವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆಸೆಯಲ್ಪಟ್ಟ ರಾಮಚಂದ್ರ ಅವರು ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!