- Advertisement -
- Advertisement -
ವಿಟ್ಲ : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನೂರು ಗ್ರಾಮದ ಕುಕ್ಕರಬೆಟ್ಟು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ನೇರಳಕಟ್ಟೆ ನಿವಾಸಿ ತಿಮ್ಮಯ ಗೌಡ ಅವರ ಪುತ್ರ ಶಾನ್ ಎನ್ ಟಿ ಎಂದು ಹೆಸರಿಸಲಾಗಿದೆ. ಇವರು ತಮ್ಮ ಇಲೆಕ್ಟ್ರಿಕ್ ಸ್ಕೂಟರಿನಲ್ಲಿ ನೇರಳಕಟ್ಟೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಕುಕ್ಕರಬೆಟ್ಟು ಎಂಬಲ್ಲಿ ಮನೀಶ್ ಅವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ಶಾನ್ ಅವರನ್ನು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 111/2024 ಕಲಂ: 279, 337 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -