- Advertisement -
- Advertisement -


ಚಿಕ್ಕಬಳ್ಳಾಪುರ: ತಾಯಿ ಸಾವಿನಿಂದ ಮನನೊಂದು ಮಗ ಸಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ.
ಯುವಕ, ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -