Sunday, June 29, 2025
spot_imgspot_img
spot_imgspot_img

ಹಾಸ್ಟೆಲ್‌ನಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -
- Advertisement -

ದ್ವಿತೀಯ ಪಿಯು ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಉದಯಗಿರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡೊಕೊಂಡ ವಿದ್ಯಾರ್ಥಿ ವಿಕಾಸ್ (18) ಎಂದು ಗುರುತಿಸಲಾಗಿದೆ.

ಹಾಸನ ನಗರದ ಉದಯಗಿರಿಯ ಮಾಸ್ಟರ್ ಪಿಯು ಕಾಲೇಜಿನಲ್ಲಿ ವಿಕಾಸ್ ದ್ವಿತೀಯ ಪಿಯುಸಿ ಓದುತ್ತಿದ್ದ. ವಿಕಾಸ್, ಚನ್ನರಾಯಪಟ್ಟಣ ತಾಲ್ಲೂಕು ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿಗೆ ಒಬ್ಬನೇ ಮಗ. ಇಂದು ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್‌ಗೆ ಬಂದಿದ್ದಾನೆ. ಇದಾದ ಮೇಲೆ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಹೀಗಾಗಿ ವಿದ್ಯಾರ್ಥಿ ಸಾವಿಗೆ ಪೋಷಕರು ಹಾಗೂ ಸಂಬಂಧಕರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಸ್ ಡ್ರೈವರ್‌ ಕಾಲೇಜಿನ ಪರ ಮಾತನಾಡಿದ್ದಾರೆ. ಆಗ ರೊಚ್ಚಿಗೆದ್ದ ಪೋಷಕರು ಡ್ರೈವರ್‌ಗೆ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ತಕ್ಷಣವೇ ಬಸ್‌ ಡ್ರೈವರ್ ಅನ್ನು ಪೊಲೀಸರು ಜೀಪ್‌ನಿಂದ ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಆಗಲೂ ರೊಚ್ಚಿಗೆದ್ದ ಸಂಬಂಧಿಕರು ಜೀಪ್‌ನಿಂದಲೂ ಹೊರಗೆಳೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ.

- Advertisement -

Related news

error: Content is protected !!