- Advertisement -
- Advertisement -


ಬ್ಯಾಗಿನಲ್ಲಿ ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
9ನೇ ತರಗತಿಯ ರವಿಕಿರಣ ಮೃತ ವಿದ್ಯಾರ್ಥಿ.
ಪುಸ್ತಕಗಳಿದ್ದ ಬ್ಯಾಗಿನೊಳಕ್ಕೆ ವಿದ್ಯಾರ್ಥಿ ಕೈಹಾಕಿದ್ದು ಈ ವೇಳೆ ಚೇಳೊಂದು ಕೈಗೆ ಕುಟುಕಿದ್ದು, ತಕ್ಷಣ ರವಿಕಿರಣ ಚೀರಾಡಿದ್ದಾನೆ. ಕೂಡಲೇ ಶಿಕ್ಷಕರು, ಶಾಲೆಯ ಮುಖ್ಯೋಪಾಧ್ಯಾಯರು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ ರವಿಕಿರಣನ ಪರಿಸ್ಥಿತಿ ವಿಷಮಿಸಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ.
- Advertisement -