Saturday, April 27, 2024
spot_imgspot_img
spot_imgspot_img

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು..!

- Advertisement -G L Acharya panikkar
- Advertisement -

ಚಲಿಸುತ್ತಿದ್ದ ಬಸ್ ನಿಂದ ಆಯ ತಪ್ಪಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಸೃಷ್ಟಿ ಮಾದರ (9) ಎಂದು ಗುರುತಿಸಲಾಗಿದೆ.

ಕೆಎಸ್‌ ಆರ್ ಟಿಸಿ ಬಸ್ ನಿಲ್ಲುವ ಮುನ್ನವೇ ವಿದ್ಯಾರ್ಥಿನಿ ಆತುರದಲ್ಲಿ ಇಳಿದಿದ್ದರಿಂದ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಆಯತಪ್ಪಿ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿ ಸೃಷ್ಟಿ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!