- Advertisement -
- Advertisement -
ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಆಂದ್ರದ ಕರ್ನೂಲ್ ಮೂಲದ ದಾಸ ಬ್ರಹ್ಮಸಾಯಿರೆಡ್ಡಿ ಎಂದು ಗುರುತಿಸಲಾಗಿದೆ.
ಈತ ಗೀತಂ ವಿಶ್ವವಿದ್ಯಾಲಯದಲ್ಲಿ ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡ್ತಿದ್ದ, ಮಂಗಳವಾರ ರಾತ್ರಿ ಊಟ ಮುಗಿಸಿಕೊಂಡು ಹೋರಟ ನಂತರ ಮಹಡಿ ಮೇಲಿಂದ ಬಿದ್ದು ಸಾವನಪ್ಪಿದ್ದಾನೆ ಎಂದು ಇಲ್ಲಿನ ಮೂಲಗಳು ಮಾಹಿತಿ ನೀಡಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Advertisement -