Friday, May 17, 2024
spot_imgspot_img
spot_imgspot_img

ಚಿತ್ರಹಿಂಸೆಯಿಂದ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಪಶು ವೈದ್ಯಕೀಯ ಪದವಿ ವಿದ್ಯಾರ್ಥಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ನಿರಂತರವಾಗಿ 29 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದರು ಎಂಬ ಮಾಹಿತಿ ಬಹಿರಂಗವಾಗಿದ್ದು ಹಾಸ್ಟೆಲ್‌ನ ಶೌಚಾಲಯದಲ್ಲಿ ಮೃತದೇಹ ಪತ್ತೆಯಾದ ಘಟನೆ ಕೇರಳದ ವಯನಾಡ್‌ನ ಕಾಲೇಜ್ ಹಾಸ್ಟೆಲ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತಿರುವನಂತಪುರದ ನಿವಾಸಿ, ವಿದ್ಯಾರ್ಥಿ ಸಿದ್ಧಾರ್ಥ ಜೆ.ಎಸ್.(20) ಎಂದು ಗುಎರುತಿಸಲಾಗಿದೆ.

ಹಾಸ್ಟೆಲ್‌ನ ಶೌಚಾಲಯದಲ್ಲಿ ವಿದ್ಯಾರ್ಥಿ ಸಿದ್ಧಾರ್ಥ ಜೆ.ಎಸ್ ಮೃತದೇಹ ಪತ್ತೆಯಾಗಿತ್ತು. ಸಿಪಿಎಂ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐ ಕಾರ್ಯಕರ್ತರು ಸಿದ್ಧಾರ್ಥಗೆ ರ್‍ಯಾಗಿಂಗ್ ಮಾಡಿದ್ದೆ ಆತ್ಮಹತ್ಯೆಗೆ ಕಾರಣ ಎಂದು ಸಿದ್ದಾರ್ಥ್ ಕುಟುಂಬಸ್ಥರು ಆರೋಪಿಸಿದ್ದರು. ಬಳಿಕ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಯಿತು.

ಕೇರಳ ಪೊಲೀಸರ ವರದಿ ಪ್ರಕಾರ, ಫೆ.16ರ ಬೆಳಗ್ಗೆ 9 ಗಂಟೆಯಿಂದ ಫೆ.17ರ ಮಧ್ಯರಾತ್ರಿ 2 ಗಂಟೆವರೆಗೆ ಸಿದ್ದಾರ್ಥ ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ಬೆಲ್ಟ್ ಮತ್ತು ಕೈಗಳಿಂದ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ. ಹೀಗಾಗಿ ತೀವ್ರ ಮಾನಸಿಕ ಒತ್ತಡದಿಂದ ಫೆ.18ರಂದು ಮಧ್ಯಾಹ್ನ 1 ಗಂಟೆಗೆ ಹಾಸ್ಟೆಲ್‌ನ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

- Advertisement -

Related news

error: Content is protected !!